NationalPosted at: Jan 22 2021 10:21AM Shareಚುನಾವಣಾ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳಕ್ಕೆ ಶನಿವಾರ ಭೇಟಿ ನೀಡಲಿರುವ ಪ್ರಧಾನಿ ಮೋದಿನವದೆಹಲಿ, ಜ 22 [ಯುಎನ್ಐ] ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125ನೇ ಜಯಂತಿ ವರ್ಷದ ಅಂಗವಾಗಿ ಶನಿವಾರ ಕೊಲ್ಕತ್ತಾದಲ್ಲಿ ನಡೆಯಲಿರುವ “ಪರಿಕ್ರಮ ದಿವಸ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಇದಕ್ಕಾಗಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಸಾಮಾನ್ಯವಾಗಿ ವಿಡಿಯೋ ಕಾನ್ಪರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದ ಮೋದಿ, ಇದೀಗ ನೇರವಾಗಿ ಕೊಲ್ಕತ್ತಾಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಕೊಲ್ಕತ್ತಾದ ವಿಕ್ಟೋರಿಯಾ ಸ್ಮಾರಕದಲ್ಲಿ ನಡೆಯಲಿರುವ ‘ಪರಾಕ್ರಮ ದಿವಸ’ದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರಕ್ಕೆ ನೇತಾಜಿಯವರು ನೀಡಿದ ಅದಮ್ಯ ಸ್ಫೂರ್ತಿ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸುವ ಮತ್ತು ಸ್ಮರಿಸುವ ಸಲುವಾಗಿ, ದೇಶದ ಜನರು, ವಿಶೇಷವಾಗಿ ಯುವಜನರು ನೇತಾಜಿಯವರಂತೆ ಪ್ರತಿಕೂಲ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಲು ಪ್ರೇರೇಪಿಸುವ ಮತ್ತು ದೇಶಭಕ್ತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜನವರಿ 23 ರಂದು 'ಪರಾಕ್ರಮ ದಿವಸ್' ಎಂದು ಅವರ ಜನ್ಮದಿನವನ್ನು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಸಂದರ್ಭದಲ್ಲಿ ನೇತಾಜಿ ಅವರ ಕುರಿತಂತೆ ಶಾಶ್ವತವಾದ ವಸ್ತುಪ್ರದರ್ಶನ ಮತ್ತು ಪ್ರೊಜೆಕ್ಷನ್ ಮ್ಯಾಪಿಂಗ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಅವರು ಈ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಯನ್ನೂ ಬಿಡುಗಡೆ ಮಾಡಲಿದ್ದಾರೆ.ನೇತಾಜಿಯವರ ಜೀವನ ಆಧಾರಿತ “ಅಮ್ರ ನೂತನ್ ಜುಬೋನೇರಿ ದೂತ್’ ಎಂಬ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುನ್ನ ಪ್ರಧಾನಮಂತ್ರಿಯವರು “21ನೇ ಶತಮಾನದಲ್ಲಿ ನೇತಾಜಿ ಸುಭಾಷ್ ಅವರ ಪರಂಪರೆಯ ಪುನರ್ ದರ್ಶನ’ ಎಂಬ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಕಲಾವಿದರ ಶಿಬಿರ ಆಯೋಜಿಸಲಾಗಿರುವ ಕೋಲ್ಕತ್ತಾದ ರಾಷ್ಟ್ರೀಯ ಗ್ರಂಥಾಲಯಕ್ಕೆ ಭೇಟಿ ನೀಡುವರು. ಸಮಾವೇಶದಲ್ಲಿ ಪಾಲ್ಗೊಂಡವರು ಮತ್ತು ಕಲಾವಿದರೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಧಾನಿ ಅವರು ಅಸ್ಸಾಂನ ಶಿವಸಾಗರ್ ನ ಜರೇಂಗಾ ಪತ್ಹಾರ್ ಗೂ ಭೇಟಿ ನೀಡಲಿದ್ದು, 1.06 ಲಕ್ಷ ಭೂಮಿ ಪಟ್ಟಾ/ಹಂಚಿಕೆ ಪತ್ರ ವಿತರಣೆ ಮಾಡಲಿದ್ದಾರೆ. ರಾಜ್ಯದ ದೇಶೀಯ ಜನರ ಭೂಮಿಯ ಹಕ್ಕು ಸಂರಕ್ಷಿಸುವ ತುರ್ತು ಅಗತ್ಯವನ್ನು ಮನಗಂಡು, ಅಸ್ಸಾಂ ಸರ್ಕಾರ ಸಮಗ್ರ ನೂತನ ಭೂಮಿ ನೀತಿ ತಂದಿದ್ದು, ದೇಶಿಯ ಜನರ ಭೂಮಿಯ ಒಡೆತನದ ಹಕ್ಕು ರಕ್ಷಿಸುತ್ತಿದೆ. ಅಸ್ಸಾಂನ ದೇಶೀಯ ಜನರಲ್ಲಿ ಸುರಕ್ಷತೆಯ ಭಾವನೆ ಮೂಡಿಸಲು ಪಟ್ಟಾ/ ಹಂಚಿಕೆ ಪತ್ರಗಳನ್ನು ನೀಡುವುದಕ್ಕೆ ಉನ್ನತ ಆದ್ಯತೆ ನೀಡಲಾಗಿದೆ. ಅಸ್ಸಾಂನಲ್ಲಿ 2016ರಲ್ಲಿ 5.75 ಲಕ್ಷ ಭೂರಹಿತ ಕುಟುಂಬಗಳಿದ್ದವು.ಪ್ರಸಕ್ತ ಸರ್ಕಾರ 2.28 ಲಕ್ಷ ಭೂಮಿಯ ಪಟ್ಟಾ/ ಹಂಚಿಕೆ ಪತ್ರಗಳನ್ನು 2016ರ ಮೇ ತಿಂಗಳಿಂದ ವಿತರಿಸಿದೆ. ಜನವರಿ 23ರ ಕಾರ್ಯಕ್ರಮ ಈ ಪ್ರಕ್ರಿಯೆಯ ಮುಂದುವರಿದ ಹೆಜ್ಜೆಯಾಗಿದೆ.ಯುಎನ್ಐ ವಿಎನ್ 1019