Published
6 months agoon
By
UNI Kannadaಬೆಂಗಳೂರು,ಜ.1( ಯು.ಎನ್.ಐ)ಕೋವಿಡ್ ಹಿನ್ನೆಲೆಯಲ್ಲಿ ಜನರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ನೋಂದಣಿಗೆ ಕಂದಾಯ ಇಲಾಖೆ ವಿಶೇಷ ರಿಯಾಯತಿ ಪ್ರಕಟಿಸಿದೆ.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್,ಹೊಸ ವರ್ಷದ ಮೊದಲ ದಿನವೇ ಸರ್ಕಾರ ಈ ರಿಯಾಯಿತಿಯನ್ನು ಜನರ ಅನುಕೂಲಕ್ಕಾಗಿ ನೀಡುತ್ತಿದೆ. ಇಂದಿನಿಂದಲೇ ಈ ಸೌಲಭ್ಯವನ್ನು ಜನರು ಪಡೆದುಕೊಳ್ಳಬಹುದು. ಇದರಿಂದ ಸರ್ಕಾರಕ್ಕೆ ಆರ್ಥಿಕವಾಗಿ ಸ್ವಲ್ಪ ಆದಾಯ ಕಡಿಮೆ ಆಗಬಹುದು. ಆದರೆ ಲಕ್ಷಾಂತರ ಜನರಿಗೆ ಇದು ಅನುಕೂಲವಾಗುತ್ತದೆ. ಎಷ್ಟೋ ರೈತರು ಅಗ್ರಿಮೆಂಟ್, ಜಿಪಿಎ ಮಾಡಿಕೊಂಡಿದ್ದರು. ಅವರೆಲ್ಲ ಈಗ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು.ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನಗಳು, ಕಟ್ಟಡಗಳು, ಅಪಾರ್ಟ್ಮೆಂಟ್ ಹಾಗೂ ಇತರ ಎಲ್ಲ ರೀತಿಯ ಸ್ಥಿರಾಸ್ತಿಗಳ ನೋಂದಣಿಗೆ ಮಾರ್ಗಸೂಚಿ ದರವನ್ನು 10% ರಷ್ಟು ಕಡಿತಗೊಳಿಸಲಾಗಿದೆ.ಈ ರಿಯಾಯಿತಿ ಜ.1ರಿಂದ ಮಾರ್ಚ್ ಅಂತ್ಯದವರೆಗೆ ಮಾತ್ರ ಲಭ್ಯ ಇರುತ್ತದೆ ಎಂದು ಅಶೋಲ್ ಮಾಹಿತಿ ನೀಡಿದರು.
ಇಂಧನ ಇಲಾಖೆ: 1385 ಅಭ್ಯರ್ಥಿಗಳಿಗೆ ಏಕಕಾಲಕ್ಕೆ ನೇಮಕ ಆದೇಶ
ಮೈಶುಗರ್ ಕಾರ್ಖಾನೆ ಆಗಸ್ಟ್ನಲ್ಲಿ ಪುನಾರಂಭ!
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ
‘ಪ್ರತಿ ಹತ್ಯೆಯಲ್ಲೂ ಬಿಜೆಪಿ ಹೆಣದ ರಾಜಕೀಯ’ – ದಿನೇಶ್ ಗುಂಡೂರಾವ್
ರಾಜಸ್ಥಾನ ಹತ್ಯೆ: ಕಾಂಗ್ರೆಸ್ ಸರಕಾರ ವಜಾಗೊಳಿಸಲು ಕಟೀಲ್ ಆಗ್ರಹ
ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಹತ್ಯೆ ಖಂಡಿಸಿದ ಎಚ್ಡಿಕೆ