Published
6 months agoon
ಹೊಸದಿಲ್ಲಿ, ಜನವರಿ 3 (ಯು.ಎನ್.ಐ.) ದೇಶದಲ್ಲಿ ಜನವರಿ 3 ರಿಂದ ಅಂದರೆ ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕರೋನಾ ಲಸಿಕೆ ನೀಡಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಸುಮಾರು 13 ಲಕ್ಷ ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಅಲ್ಲದೆ, ಲಸಿಕೆಗೆ ನೋಂದಣಿ ಮಾಡಿಕೊಂಡವರ ಸಂಖ್ಯೆ 27 ಲಕ್ಷ ದಾಟಿದೆ. ದೇಶದಲ್ಲಿ ಲಸಿಕೆಗಳು ಮತ್ತು ನೋಂದಣಿಗಳ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ರಾಷ್ಟ್ರಕ್ಕೆ ನೀಡಿದ ಸಂದೇಶದಲ್ಲಿ 15-18 ವರ್ಷ ವಯಸ್ಸಿನ ಮಕ್ಕಳು ಮತ್ತು ಹದಿಹರೆಯದವರಿಗೆ ಜನವರಿ 3 ರಿಂದ ಕರೋನಾ ಲಸಿಕೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಪ್ರಸ್ತುತ, ದೇಶದಲ್ಲಿ 15-18 ವರ್ಷ ವಯಸ್ಸಿನ ಮಕ್ಕಳ ಸಂಖ್ಯೆ ಸುಮಾರು 100 ಮಿಲಿಯನ್ ಆಗಿದೆ. ಈಗಾಗಲೇ ವಿಶ್ವದ 30ಕ್ಕೂ ಹೆಚ್ಚು ದೇಶಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ.
ಮಕ್ಕಳಿಗೆ ಏಕೆ ಲಸಿಕೆ ನೀಡಬೇಕು?
– ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಪ್ರಕಾರ, ಕರೋನಾ ಲಸಿಕೆ ಮಕ್ಕಳು ಕೋವಿಡ್ -19 ಸೋಂಕಿಗೆ ಒಳಗಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ.
– ಗಂಭೀರ ಕಾಯಿಲೆಗಳು, ಆಸ್ಪತ್ರೆಗೆ ದಾಖಲು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಮತ್ತು ಮಕ್ಕಳಲ್ಲಿ ಸಾವಿನ ಅಪಾಯವನ್ನು ಕರೋನಾ ಲಸಿಕೆ ಕಡಿಮೆ ಮಾಡುತ್ತದೆ.
– ಆರೋಗ್ಯ ತಜ್ಞರ ಪ್ರಕಾರ, ಸ್ಥೂಲಕಾಯತೆ, ಮಧುಮೇಹ ಅಥವಾ ಆಸ್ತಮಾದಿಂದ ಬಳಲುತ್ತಿರುವ ಮಕ್ಕಳು, ಕೋವಿಡ್ -19 ನಿಂದ ತೀವ್ರವಾಗಿ ಅನಾರೋಗ್ಯಕ್ಕೆ ಒಳಗಾಗುವ ಅಪಾಯ ಹೆಚ್ಚಿರುತ್ತದೆ.
– ಕೋವಿಡ್-19 ಸೋಂಕಿತ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೂ ಲಸಿಕೆ ಅಗತ್ಯ.
– ದಕ್ಷಿಣ ಆಫ್ರಿಕಾದಲ್ಲಿ ಒಮೈಕ್ರಾನ್ ನಿಂದಾಗಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಭಾರತದಲ್ಲಿ ಮಕ್ಕಳಿಗೆ ಲಸಿಕೆಯನ್ನು ಪ್ರಾರಂಭಿಸುವುದು ಉತ್ತಮ ಬೆಳವಣಿಗೆ.
– ಮಕ್ಕಳಿಗೆ ಲಸಿಕೆ ಹಾಕುವುದರಿಂದ ಅವರು ಶಾಲೆಗೆ ಹೋಗುವುದನ್ನು ಸುರಕ್ಷಿತವಾಗಿಸುತ್ತದೆ. ಅಲ್ಲದೆ, ಕ್ರೀಡೆಗಳು ಹಾಗೂ ಇನ್ನಿತರೆ ಜನಸಂದಣಿ ಪ್ರದೇಶದಲ್ಲಿ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಸೇರೋದ್ರಿಂದ ರಕ್ಷಣೆ ಪಡೆಯುತ್ತಾರೆ.
– ಮಕ್ಕಳು ಕರೋನಾದಿಂದ ಕಡಿಮೆ ರೋಗಲಕ್ಷಣಗಳನ್ನು ತೋರಿಸಿದರೂ ಮಕ್ಕಳು ಈ ವೈರಸ್ನ ಸಾಂಕ್ರಾಮಿಕಗೊಳಿಸುವ ಹೆಚ್ಚಿನ ಪಾಲು ಹೊಂದಿದ್ದಾರೆ. ಅದಕ್ಕಾಗಿಯೇ ಮಕ್ಕಳಿಗೆ ಲಸಿಕೆ ಹಾಕುವುದು ಮುಖ್ಯವಾಗಿದೆ.
– ಇಲ್ಲಿಯವರೆಗೆ, ಭಾರತದಲ್ಲಿ ಕೇವಲ 61 ಪ್ರತಿಶತದಷ್ಟು ವಯಸ್ಕರರು ಕರೋನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದುಕೊಂಡಿದ್ದಾರೆ. ಅಂದರೆ, ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಪೂರ್ಣವಾಗಿ ಲಸಿಕೆಯನ್ನು ಹೊಂದಿಲ್ಲ. ಇಂತಹ ಜನರ ಮಕ್ಕಳು ಸೋಂಕಿನ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಆದ್ದರಿಂದ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ವ್ಯಾಕ್ಸಿನೇಷನ್ ಅನ್ನು ಪ್ರಾರಂಭಿಸಿದೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್