Published
5 months agoon
By
Vidyashree Sಶ್ರೀನಗರ: ಇಲ್ಲಿಯ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ಧಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಕಾರಣ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್ ಇ ಮೊಹಮ್ಮದ್ (ಜೆಇಎಂ) ನಡೆಸಿದ ದಾಳಿಗೆ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾದ ಮರುದಿನವೇ ಈ ಕಾರ್ಯಾಚರಣೆ ನಡೆದಿದೆ.
ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ ಉಗ್ರರಿಗೆ ಶರಣಾಗಲು ಅವಕಾಶ ನೀಡಲಾಯಿತು. ಅವರು ನಿರಾಕರಿಸುವುದರ ಜೊತೆಗೆ ಮನಬಂದಂತೆ ಗುಂಡು ಹಾರಿಸಿದರು. ಹಾಗಾಗಿ ನಾವು ಪ್ರತಿದಾಳಿ ನಡೆಸಿದೆವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.