Published
2 weeks agoon
By
Vanitha Jainದಿಸ್ಪುರ್: ಜೂನ್ 23 (ಯು.ಎನ್.ಐ.) ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಇನ್ನೂ 12 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 100ಕ್ಕೆ ಏರಿದೆ.
ಹೋಜೈ ಜಿಲ್ಲೆಯಲ್ಲಿ ನಾಲ್ಕು ಸಾವುಗಳು ವರದಿಯಾಗಿದ್ದರೆ, ಕಾಮ್ರೂಪ್ ನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಬರ್ಪೇಟಾ ಮತ್ತು ನಲ್ಬರಿಯಲ್ಲಿ ತಲಾ ಮೂವರು ಸಾವನ್ನಪ್ಪಿದ್ದಾರೆ. 32 ಜಿಲ್ಲೆಗಳ 4,941 ಗ್ರಾಮಗಳಲ್ಲಿ 54.7 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೊಳಗಾಗಿದ್ದಾರೆ.
2.71 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ಪಡೆದಿರುವ ಸಂತ್ರಸ್ತ ಜಿಲ್ಲೆಗಳಲ್ಲಿ ಒಟ್ಟು 845 ಪರಿಹಾರ ಶಿಬಿರಗಳು ಮತ್ತು 1025 ಪರಿಹಾರ ವಿತರಣಾ ಕೇಂದ್ರಗಳನ್ನು ಜಿಲ್ಲಾಡಳಿತಗಳು ಸ್ಥಾಪಿಸಿವೆ. ಚಿರಾಂಗ್ ಜಿಲ್ಲೆಯಲ್ಲಿ ಬುಧವಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ.
ಬಜಾಲಿ, ಬಕ್ಸಾ, ಬರ್ಪೇಟಾ, ಬಿಸ್ವನಾಥ್, ಬೊಂಗೈಗಾಂವ್, ಕ್ಯಾಚಾರ್, ಚಿರಾಂಗ್, ದರ್ರಾಂಗ್, ಧೇಮಾಜಿ, ಧುಬ್ರಿ, ದಿಬ್ರುಗಢ್, ದಿಮಾ-ಹಸಾವೊ, ಗೋಲ್ಪಾರಾ, ಗೋಲಾಘಾಟ್, ಹೈಲಕಂಡಿ, ಹೋಜೈ, ಕಾಮ್ರೂಪ್, ಕಾಮ್ರೂಪ್ ಮೆಟ್ರೋಪಾಲಿಟನ್, ಕಾರ್ಬಿ ಆಂಗ್ಲಾಂಗ್ ಪಶ್ಚಿಮ, ಕರೀಮ್ಗಂಜ್ಲಿಖ್ ಪಶ್ಚಿಮ , ಮೋರಿಗಾಂವ್, ನಾಗಾಂವ್, ನಲ್ಬರಿ, ಶಿವಸಾಗರ್, ಸೋನಿತ್ಪುರ್, ದಕ್ಷಿಣ ಸಲ್ಮಾರಾ, ತಮುಲ್ಪುರ್, ತಿನ್ಸುಕಿಯಾ ಮತ್ತು ಉದಲ್ಗುರಿ ಜಿಲ್ಲೆಗಳು ಪ್ರವಾಹದಿಂದ ತತ್ತರಿಸುತ್ತಲೇ ಇವೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್