Published
2 weeks agoon
ಬೆಂಗಳೂರು: ಆಗಸ್ಟ್ 05 (ಯು.ಎನ್.ಐ.) ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ.
ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಮೋಸ ಮಾಡಿದೆ. ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂದು ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡರು.
ಬಿಜೆಪಿಯವರು ಏನೇ ಮಾಡಲಿ, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರ ನಿರ್ಧಾರ ಖಂಡಿಸಿ ಕಾಂಗ್ರೆಸ್ ನಾಯಕರು ನಗರಾಭಿವೃದ್ಧಿ ಕಚೇರಿಗೆ ಹೋಗಿ ಅಲ್ಲಿ ‘ಬಿಜೆಪಿ ಕಚೇರಿ’ ಎಂದು ನಾಮಫಲಕ ಹಾಕಿ ಬಂದಿದ್ದಾರೆ. ಇದು ನಮ್ಮ ಪಕ್ಷದ ಒಗ್ಗಟ್ಟಿನ ಹೋರಾಟ. ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಬೆಂಗಳೂರು ನಾಯಕರ ಹೋರಾಟ ಮುಂದುವರಿಯಲಿದೆ. ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.
ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಕೈ ಬಿಡುವುದಿಲ್ಲವೆಂಬುದಕ್ಕೆ ನಾನೇ ಉದಾಹರಣೆ: ಬಿಎಸ್ ವೈ
ನಿತಿನ್ ಗಡ್ಕರಿ ಔಟ್, ಬಿಎಸ್ ವೈ ಇನ್
ಸೇವೆ ಸಲ್ಲಿಸುವ ಗೌರವಕ್ಕೆ ಆಭಾರಿ: ಮಾಜಿ ಸಿಎಂ ಬಿಎಸ್ ವೈ
ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಬಂದಿದೆ. ಆದ್ರೆ…: ಸಚಿವ ಆರ್. ಅಶೋಕ್
ಬಿಜೆಪಿಯ ಅತ್ಯುನ್ನತ ಮಂಡಳಿಯಲ್ಲಿ ಮಾಜಿ ಸಿಎಂ ಬಿಎಸ್ ವೈಗೆ ಸ್ಥಾನ
ಎಲ್ಲವೂ ಸರಿಯಿದೆ, ಏನೂ ತೊಂದರೆಯಿಲ್ಲ: ಸಿಎಂ ಬೊಮ್ಮಾಯಿ