Published
1 month agoon
ಬೆಂಗಳೂರು: ಮೇ 14 (ಯು.ಎನ್.ಐ.) ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದೂ ಅವರು ನಗುತ್ತ ನುಡಿದರು.
ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಕಾಂಗ್ರೆಸ್ ಪಕ್ಷದೊಳಗೆ ಗೊಂದಲಗಳಿವೆ. ಬಿಜೆಪಿಯಲ್ಲಿ ನಾಯಕತ್ವ ಮತ್ತಿತರ ಯಾವುದೇ ಗೊಂದಲಗಳಿಲ್ಲ ಎಂದೂ ಅವರು ಪ್ರತಿಕ್ರಿಯಿಸಿದರು.
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಸಿಎಂ
ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ: 819 ಕೋಟಿ ರೂ. ಲೂಟಿ!
ಬೆಳಗಾವಿ ಭೀಕರ ಅಪಘಾತ: ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ
ಅಂಜನಾದ್ರಿ ಬೆಟ್ಟದಲ್ಲಿ ಜುಲೈನಲ್ಲಿ ಕಾಮಗಾರಿ ಪ್ರಾರಂಭಿಸಲು ಸಿಎಂ ಬೊಮ್ಮಾಯಿ ಸೂಚನೆ
ಎಸ್. ಎಂ. ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ
ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ತಾಕೀತು