Published
5 months agoon
ವಿಧಾನಸಭೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳೆಹಾನಿ, ಮನೆ ಕಳೆದುಕೊಂಡಿರುವವರಿಗೆ ಪರಿಹಾರ ಸಿಗದೆ ಇರುವ ಬಗ್ಗೆ ಸದನದ ಗಮನ ಸೆಳೆದರು. ಈ ಮಧ್ಯೆ ಮಾತನಾಡಿದ ಅವರು, ರಾಜ್ಯದಲ್ಲಿ ಹವಾಮಾನ ಬದಲಾವಣೆಯಾಗುತ್ತಿದೆ ಎಂದು ವಿಜ್ಞಾನಿಗಳು ನೀಡಿರುವ ಹೇಳಿಕೆ ಬಗ್ಗೆ ಸರ್ಕಾರವನ್ನು ಎಚ್ಚರಿಸಿದರು.
ಹವಾಮಾನ ಬದಲಾವಣೆ ಕೃಷಿ ಪದ್ಧತಿಯನ್ನು ತೀವ್ರವಾಗಿ ಬಾಧಿಸಲಿದೆ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. 2030ರೊಳಗೆ ಭತ್ತ ಶೇಕಡಾ 5.6 ಕಡಿಮೆಯಾಗುತ್ತದೆ. ಕಡಲೆ 19.2, ರಾಗಿ 12, ಶೇಂಗಾ 9.6, ಸೋಯಾಬಿನ್ 20.6 ಕಡಿಮೆಯಾಗಲಿದೆ ಎಂದು ಹವಾಮಾನ ವಿಜ್ಞಾನಿಗಳು ರಾಜ್ಯಕ್ಕೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಹವಾಮಾನ ಬದಲಾವಣೆಯಿಂದಾಗಿ ಕೆಲವು ಬೆಳೆಗಳಾದ ಹತ್ತಿ, ಜೋಳ, ಕಬ್ಬು ಬೆಳೆಯಲ್ಲಿ ಇಳುವರಿ ಹೆಚ್ಚಾಗಲಿದೆ ಎಂದು ತಿಳಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿನ ಸ್ವಾಯತ್ತ ಸಂಸ್ಥೆಯಾಗಿರುವ ಎನ್ವಾರನ್ ಮೆಂಟಲ್ ಮ್ಯಾನೇಜ್ ಮೆಂಟ್ ಆಂಡ್ ಪಾಲಿಸಿ ರಿಸರ್ಚ್ ಇನ್ಸಿಟ್ಯೂಟ್ ಈ ವರದಿಯನ್ನು ನೀಡಿದೆ. ಈ ವರದಿಯ ಬಗ್ಗೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸುವುದು ಅವಶ್ಯಕ ಎಂದು ಸಿದ್ದರಾಮಯ್ಯ ತಿಳಿಸಿದರು.
ಬಿಡಿಎ ಬಡಾವಣೆ ಮನೆಗಳ ಸಕ್ರಮಕ್ಕೆ ನಿರ್ಧಾರ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ
ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದ ಬೊಮ್ಮಾಯಿ
ಎಂಬಿಎ ಪದವೀಧರೆಯಾಗಿದ್ರೂ ಕೆಲಸ ಸಿಗದೆ ಉಡುಪಿಯ ಸಹನಾ ಸಾವು; ಡಿಕೆಶಿ ಸಂತಾಪ
ರಾಷ್ಟ್ರಗೀತೆ ಹಾಡೋದನ್ನು ಮುತಾಲಿಕ್ ಹೇಳಿ ಕೊಡಬೇಕಾ? – ಜಮೀರ್