Published
6 months agoon
By
UNI Kannadaಕೇಪ್ ಟೌನ್, ಜ 8(ಯುಎನ್ ಐ) ಜೋಹಾನ್ಸ್ಬರ್ಗ್ನಲ್ಲಿ ಟೀಂ ಇಂಡಿಯಾ ವಿರುದ್ಧ ನಡೆದ ಎರಡನೇ ಟೆಸ್ಟ್ನಲ್ಲಿ ದಕ್ಷಿಣ ಆಫ್ರಿಕಾ ಭರ್ಜರಿ ಜಯ ಸಾಧಿಸಿರುವುದು ಗೊತ್ತೇಇದೆ. ಇದರಿಂದ ಮೂರು ಟೆಸ್ಟ್ಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1-1 ರಿಂದ ಸಮಬಲದಲ್ಲಿದೆ. ಈ ಕ್ರಮದಲ್ಲಿ ಸರಣಿ ವಿಜೇತರನ್ನು ನಿರ್ಧರಿಸುವ ಅಂತಿಮ ಟೆಸ್ಟ್ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಜನವರಿ 11 ರಿಂದ ಕೇಪ್ ಟೌನ್ನಲ್ಲಿ ನಡೆಯಲಿದೆ. ಆದರೆ, ಗಾಯದ ಸಮಸ್ಯೆಯಿಂದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ. ಒಂದು ವೇಳೆ . ಕೊಹ್ಲಿ ಫೈನಲ್ ತಂಡ ಪ್ರವೇಶಿಸಿದರೆ, ಹನುಮ ವಿಹಾರಿ ಮತ್ತೊಮ್ಮೆ ಬೆಂಚ್ಗೆ ಸೀಮಿತವಾಗಲಿದ್ದಾರೆ.
ಎರಡನೇ ಟೆಸ್ಟ್ ನಲ್ಲಿ ಕೊಹ್ಲಿ ಸ್ಥಾನದಲ್ಲಿ ಹನುಮ ವಿಹಾರಿಗೆ ಸ್ಥಾನ ಕಲ್ಪಿಸಲಾಗಿತ್ತು. ಈ ನಡುವೆ … ಜೋಹಾನ್ಸ್ ಬರ್ಗ್ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ರಿಷಬ್ ಪಂತ್ ವಿಕೆಟ್ ಕಳೆದುಕೊಂಡ ರೀತಿ ತೀವ್ರ ಟೀಕೆಗೆ ಗುರಿಯಾಗಿದೆ. ಈ ಕ್ರಮದಲ್ಲಿ ಮೂರನೇ ಟೆಸ್ಟ್ನಲ್ಲಿ ಆತನನ್ನು ತಂಡದಿಂದ ಹೊರಗಿಟ್ಟು ಅನುಭವಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾಗೆ ಅವಕಾಶ ನೀಡಬೇಕೆಂದು ಎಂದು ಮಾಜಿಯೊಬ್ಬರು ಸಲಹೆ ನೀಡಿದ್ದಾರೆ. ಇದರೊಂದಿಗೆ ಕೇಪ್ ಟೌನ್ ಟೆಸ್ಟ್ ನಲ್ಲಿ ಪಂತ್ ಅವರನ್ನು ಬದಲಾಯಿಸಲು ಕೊಹ್ಲಿ, ಕೋಚ್ ದ್ರಾವಿಡ್ ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ. ಕಳೆದ ಕೆಲ ವರ್ಷಗಳಿಂದ ರಿಷಬ್ ಪಂತ್ ಉತ್ತಮ ಫಾರ್ಮ್ನಲ್ಲಿಲ್ಲ ಪ್ರಸಕ್ತ ಸರಣಿಯಲ್ಲಿ ಪಂತ್ ನಾಲ್ಕು ಇನ್ನಿಂಗ್ಸ್ಗಳಲ್ಲಿ ಒಟ್ಟು 59 ರನ್ ಗಳಿಸಿದ್ದಾರೆ.
ಚೊಚ್ಚಲ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಮಧ್ಯಪ್ರದೇಶ; ಆರ್ ಸಿಬಿ .. ಆರ್ ಸಿಬಿ ಎಂಬ ಕೂಗು
ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ಕೋವಿಡ್ ಸೋಂಕು!
ಕ್ರಿಕೆಟ್: ಐರ್ಲೆಂಡ್, ಇಂಗ್ಲೆಂಡ್ ವಿರುದ್ಧದ ಪಂದ್ಯಗಳು ಸೋನಿಯಲ್ಲಿ ಪ್ರಸಾರ
ಕ್ರಿಕೆಟಿಗ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದರ್ಪಣೆ ಮಾಡಿ 15 ವರ್ಷ! ಖುಷಿಯಲ್ಲಿ ಆರ್ ಎಸ್
ವಿಶ್ವ ಈಜು ಚಾಂಪಿಯನ್ಶಿಪ್: ಕೈ ಮುರಿದುಕೊಂಡ ಆಸ್ಟ್ರೇಲಿಯಾದ ಈಜುಗಾರ್ತಿ!
ತಂಡಕ್ಕೆ ಆಯ್ಕೆಯಾಗಲಿಲ್ಲವೆಂದು ಪಾಕ್ ಕ್ರಿಕೆಟಿಗ ಆತ್ಮಹತ್ಯೆ ಯತ್ನ