Published
7 months agoon
By
prathamಬೆಂಗಳೂರು: ಅಕ್ಟೋಬರ್ 28 (ಯು.ಎನ್.ಐ.) ಹವಾಲಾ ಹಣ ಪ್ರಕರಣದಲ್ಲಿ ಬಂಧಿತರಾಗಿದ್ದ ಸಿಪಿಐ (ಎಂ) ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೇಶ್ ಕೊಡಿಯೇರಿಗೆ ಗುರುವಾರ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಎಂ ಜಿ ಉಮಾ ಅವರ ನೇತೃತ್ವದ ಏಕಸದಸ್ಯ ಪೀಠವು ಷರತ್ತುಗಳಿಗೆ ಒಳಪಟ್ಟು ಬಿನೇಶ್ ಮನವಿಯನ್ನು ಪುರಸ್ಕರಿಸಲಾಗಿದೆ ಎಂದು ಹೇಳಿತು. ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದ್ದ ಹಿನ್ನಲೆಯಲ್ಲಿ ಮಾರ್ಚ್ನಲ್ಲಿ ಬಿನೇಶ್ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.
ಕಳೆದ ವರ್ಷದ ಆಗಸ್ಟ್ನಲ್ಲಿ ಬೆಂಗಳೂರಿನ ಮಾದವಸ್ತು ನಿಯಂತ್ರಣ ಸಂಸ್ಥೆಯ ಅಧಿಕಾರಿಗಳು 60 ಎಂಡಿಎಂಎ ಹೊಂದಿದ್ದ ಹಲವರನ್ನು ಬಂಧಿಸಿದ್ದರು. ಈ ಪೈಕಿ ಮೊಹಮ್ಮದ್ ಅನೂಪ್ನನ್ನು ಜಾರಿ ನಿರ್ದೇಶಾಲಯ ವಶಕ್ಕೆ ಪಡೆದಿತ್ತು.
ಬಿನೇಶ್ ಅವರ ರೆಸ್ಟೋರೆಂಟ್ಗೆ ಬೇನಾಮಿದಾರ್ ಆಗಿ ನೇಮಕವಾಗಿದ್ದು, ತಮ್ಮ ಬಾಸ್ ಆಗಿದ್ದ ಬಿನೇಶ್ ಹೇಳಿದ್ದನ್ನು ಮಾಡುತ್ತಿದ್ದಾಗಿ ಅನೂಪ್ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದರು.
ಮತ್ತೊಂದು ಕಡೆ, ಬಿನೇಶ್ ಅವರು ಅನೂಪ್ ಪರಿಚಿತನಾಗಿದ್ದು, ರೆಸ್ಟೋರೆಂಟ್ ತೆರೆಯಲು ಹಣ ನೀಡಿದ್ದಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ವಿಚಾರಣೆಯ ಸಂದರ್ಭದಲ್ಲಿ ಹಲವು ಬ್ಯಾಂಕ್ ಖಾತೆಗಳು ಪತ್ತೆಯಾಗಿದ್ದು, ಕೆಲವು ಅನೂಪ್ ಹೆಸರಿನಲ್ಲೂ ಇದ್ದವು. ಇವುಗಳಿಗೆ ಬಿನೇಶ್ ಅವರು ಅಪಾರ ಪ್ರಮಾಣದ ಹಣವನ್ನು ವರ್ಗಾವಣೆ ಮಾಡಿದ್ದರು. ಇದು ಕ್ರಿಮಿನಲ್ ಚಟುವಟಿಕೆಗಳಿಗೆ ಕಾರಣವಾಗಿತ್ತು ಎಂದು ಆಪಾದಿಸಲಾಗಿದೆ.
ಕಾನೂನುಬಾಹಿರ ಹಣ ವರ್ಗಾವಣೆ ನಿಯಂತ್ರಣ ಕಾಯಿದೆಯ ಸೆಕ್ಷನ್ 3ರ ಅಡಿ ಬಿನೇಶ್ ಅಪರಾಧಿ ಎಂಬುದನ್ನು ಸಾಬೀತುಪಡಿಸುವ ಸಂಬಂಧ ಸಾಕ್ಷ್ಯ ಸಂಗ್ರಹಿಸುವ ನಿಟ್ಟಿನಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ಜಾರಿ ನಿರ್ದೇಶನಾಲಯ ವಾದಿಸಿತ್ತು. ಆನಂತರ, ಬಂಧನಕ್ಕೆ ಒಳಗಾಗಿದ್ದ ಬಿನೇಶ್ ಅವರು ಸುಮಾರು ಒಂದು ವರ್ಷದಿಂದ ಜೈಲಿನಲ್ಲಿದ್ದರು
ಜ್ಞಾನವಾಪಿ ಮಸೀದಿ ಸಮೀಕ್ಷೆ; ಕೊಳದಲ್ಲಿ ಶಿವಲಿಂಗ ಪತ್ತೆ: ವಕೀಲರ ಹೇಳಿಕೆ
ಜ್ಞಾನವಾಪಿ ಮಸೀದಿ; ಮೂರನೇ ದಿನಕ್ಕೆ ಸರ್ವೇ
ಜ್ಞಾನವಾಪಿ ಮಸೀದಿ; ಮುಂದುವರಿದ ಸಮೀಕ್ಷೆ ಕಾರ್ಯ
ಜ್ಞಾನವಾಪಿ ಶೃಂಗಾರ್ ಗೌರಿ ಸಂಕೀರ್ಣ ಸಮೀಕ್ಷೆ ತಡೆಗೆ ಸುಪ್ರೀಂ ನಿರಾಕರಣೆ
ತಾಜ್ಮಹಲ್ ಕೊಠಡಿ ಸಮೀಕ್ಷೆ; ಅರ್ಜಿ ತಿರಸ್ಕರಿಸಿದ ಕೋರ್ಟ್
ಜ್ಞಾನವಾಪಿ ಮಸೀದಿ ; ಮೇ ೧೭ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ನ್ಯಾಯಾಲಯ