Published
6 months agoon
ಉಡುಪಿ: ಜನೆವರಿ 01 (ಯು.ಎನ್.ಐ.) ಇತ್ತೀಚೆಗೆ ಉಡುಪಿ ಜಿಲ್ಲೆ ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೇಲೆ ಪೊಲೀಸ್ ದೌರ್ಜನ್ಯವಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಚಿವರು, ಇಂದು, ಕೋಟತಟ್ಟು ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಎರಡು ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಪೊಲೀಸ್ ಲಾಠಿಚಾರ್ಜ್ ನಲ್ಲಿ ಗಾಯಗೊಂಡ ಪ್ರತಿ ಕುಟುಂಬಕ್ಕೆ ೫೦೦೦೦ ಸಾವಿರ ರೂಪಾಯಿಗಳ ಚೆಕ್ ಅನ್ನು ಸ್ಥಳದಲ್ಲಿಯೇ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು ಕೊರಗ ಕುಟುಂಬದ ವೈವಾಹಿಕ ಸಮಾರಂಭದಲ್ಲಿ ಲಾಠಿಛಾರ್ಜ್ ಮಾಡಿ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಕರಣದ ಸಂಬಂಧ ಕೊರಗ ಕುಟುಂಬದ ಸದಸ್ಯರ ವಿರುದ್ಧ ದಾಖಲಾದ ಪೊಲೀಸ್ ಮೊಕದ್ದಮೆಯನ್ನೂ ಹಿಂಪಡೆಯುವ ಬಗ್ಗೆ, ಸೂಕ್ತ ಕ್ರಮವನ್ನು ತೆಗೆದುಕೊಳ್ಳುವ ಭರವಸೆಯನ್ನೂ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಶ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಇತರ ಅಧಿಕಾರಿಗಳು ಹಾಜರಿದ್ದರು.
“ಡಿಕೆಶಿ ಮಾತಾಡಲು ಅವಕಾಶ ಕೊಟ್ಟಿಲ್ಲ” – ಶಿಸ್ತು ಸಮಿತಿ ನೋಟಿಸ್ಗೆ ಲಕ್ಷ್ಮೀನಾರಾಯಣ ಟೀಕಾಪ್ರಹಾರ
ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ
“ಕೂಡಲ ಸಂಗಮವು ಜನಾಕರ್ಷಣೆಯ ತಾಣವಾಗಬೇಕು” – ಸಿಎಂ ಬೊಮ್ಮಾಯಿ
45.56 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅರಮನೆ, ಕೋಟೆ ಸಂರಕ್ಷಣೆ, ಜೀರ್ಣೋದ್ಧಾರ
ವಿದ್ಯುತ್ ಬಿಲ್ ಪಾವತಿಗೆ 6 ತಿಂಗಳ ಕಾಲಾವಕಾಶ ಇಲ್ಲ : ಬೆಸ್ಕಾಂ ಸ್ಪಷ್ಟನೆ
‘ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ’