Published
5 months agoon
By
Vanitha Jainನವದೆಹಲಿ, ಡಿಸೆಂಬರ್ 14(ಯು.ಎನ್.ಐ) ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣವು ನಿರ್ಲಕ್ಷ್ಯ ಅಥವಾ ನಿಷ್ಠುರತೆಯಿಂದ ನಡೆದುದಲ್ಲ. ಇದು ಯೋಜಿತ ಮತ್ತು ಉದ್ದೇಶಪೂರ್ವಕ ಕೃತ್ಯ ಎಂದು ಉತ್ತರ ಪ್ರದೇಶ ಪೊಲೀಸ್ನ ವಿಶೇಷ ತನಿಖಾ ತಂಡ (ಎಸ್ಐಟಿ) ತಿಳಿಸಿದೆ.
ತನಿಖೆ ಕೈಗೊಂಡ ಎಸ್ಐಟಿ ತನಿಖಾಧಿಕಾರಿ ವಿಧ್ಯಾರಾಮ್ ದಿವಾಕರ್ ಈ ಘಟನೆಯ ಉದ್ದೇಶಪೂರ್ವಕವಾಗಿಯೇ ನಡೆದಿದೆ ಎಂದು ಸಾಬೀತುಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಬಾಗಿಯಾಗಿದ್ದ 13 ಆರೋಪಿಗಳ ವಿರುದ್ಧ ಹೊಸ ಸೆಕ್ಷನ್ಗಳನ್ನು ದಾಖಲಿಸಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಅವರ ಅಪರಾಧವನ್ನು ಕೊಲೆ ಯತ್ನದ ಆರೋಪದಡಿಯಲ್ಲಿ ಶಿಕ್ಷಾರ್ಹಗೊಳಿಸಲು ಎಸ್ಐಟಿ ಡಿಸೆಂಬರ್ 13ರಂದು ಅರ್ಜಿ ಸಲ್ಲಿಸಿತು.
ಐಪಿಸಿ ಸೆಕ್ಷನ್ 279, 338 ಮತ್ತು 304ಎ ಬದಲಿಗೆ ವಾರಂಟ್ನಲ್ಲಿ ಹೊಸ ಸೆಕ್ಷನ್ಗಳನ್ನು ಸೇರಿಸಲು ಎಸ್ಐಟಿ ತನಿಖಾಧಿಕಾರಿ ವಿಧ್ಯಾರಾಮ್ ದಿವಾಕರ್ ಕಳೆದ ವಾರ ಸಿಜೆಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಅಕ್ಟೋಬರ್ 3 ರಂದು, ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರು ಮೆರವಣಿಗೆ ಹೋಗುತ್ತಿದ್ದ ರೈತರ ಮೇಲೆ ಎಸ್ಯುವಿ ಕಾರು ಹರಿಸಿದ ಪರಿಣಾಮ ಸ್ಥಳೀಯ ಪತ್ರಕರ್ತರೂ, ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು.
ಈ ಹಿಂಸಾಚಾರ ಕೃತ್ಯಕ್ಕೆ ಕಾರಣರಾದ ಆಶಿಶ್ ಮಿಶ್ರಾ, ಲುವ್ಕುಶ್, ಆಶಿಶ್ ಪಾಂಡೆ, ಶೇಖರ್ ಭಾರ್ತಿ, ಅಂಕಿತ್ ದಾಸ್, ಲತೀಫ್, ಶಿಶುಪಾಲ್, ನಂದನ್ ಸಿಂಗ್, ಸತ್ಯಂ ತ್ರಿಪಾಠಿ, ಸುಮಿತ್ ಜೈಸ್ವಾಲ್, ಧಮೇರ್ಂದ್ರ ಬಂಜಾರಾ, ರಿಂಕು ರಾಣಾ ಮತ್ತು ಉಲ್ಲಾಸ್ ತ್ರಿವೇದಿ ಅವರನ್ನು ಎಸ್ಐಟಿ ಇದುವರೆಗೆ ಬಂಧಿಸಿ ಲಖೀಂಪುರ ಕಾರಾಗೃಹದಲ್ಲಿ ಇರಿಸಲಾಗಿದೆ.
ಏತನ್ಮಧ್ಯೆ, ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠವು ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಸ್ಥಳವನ್ನು ಬಂದ್ ಮಾಡಿ: ಕೋರ್ಟ್ ಆದೇಶ
ಜ್ಞಾನವಾಪಿ ಮಸೀದಿಯ ಕೊಠಡಿಯಲ್ಲಿ ಶಿವಲಿಂಗ ಪತ್ತೆ: ವಿಎಚ್ಪಿ ಸಂತಸ
ಜೆಡಿಯು ಶಾಸಕ ನೃತ್ಯ ; ಪಕ್ಷದ ಎಚ್ಚರಿಕೆ
1402 ವರ್ಷಗಳ ನಂತರ ವೈಶಾಖ ಪೂರ್ಣಿಮೆಯಂದು ಪೂರ್ಣ ಚಂದ್ರಗ್ರಹಣ
ಕೇರಳದಲ್ಲಿ ಟ್ವೆಂಟಿ-20 ಜೊತೆ ಎಎಪಿ ರಾಜಕೀಯ ಮೈತ್ರಿ!
ಕೇರಳ ಮಳೆ ಎಚ್ಚರ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ