Published
5 months agoon
By
Vanitha Jainಬೆಂಗಳೂರು ಗ್ರಾಮಾಂತರ, ಡಿಸೆಂಬರ್ 14(ಯು.ಎನ್.ಐ) ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬೆಂಗಳೂರು ಗ್ರಾಮಾಂತರ ಬಿಜೆಪಿಯ ಕೈ ತಪ್ಪಿದೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಎಸ್. ವಿ ರವಿ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ 1274 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವಿನ ಗರಿ ಮೂಡಿಸಿಕೊಂಡಿದ್ದಾರೆ.
ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಸೂರಜ್ ರೇವಣ್ಣ, 2247 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ವಿಶ್ವನಾಥ್ 374 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಎ ಶಂಕರ್ 747 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.
ಕೊಡಗು: ನೂರಾ ಐದು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದು, 705 ಮತಗಳು ಬಂದಿವೆ. ಕಾಂಗ್ರೆಸ್ ನ ಮಂಥರ್ ಗೌಡ ಅವರಿಗೆ 603 ಮತಗಳು ಸಿಕ್ಕಿವೆ.
ಬೀದರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಜಯ, ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಗೆಲುವು, ಕಾಂಗ್ರೆಸ್ ನ ಕೆಜಿಎಫ್ ಬಾಬು ಸೋಲು, ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು, ಉತ್ತರ ಕನ್ನಡ- ಬಿಜೆಪಿ ಅಭ್ಯರ್ಥಿ ಗಣಪತಿ ಗಣಪತಿ ಉಳ್ವೇಕರ್ ಗೆಲುವು, ಬಳ್ಳಾರಿ- ಬಿಜೆಪಿ ಅಭ್ಯರ್ಥಿ ವೈ.ಎಂ.ಸತೀಶ್ ಗೆಲುವು, ಬಿಜಾಪುರ- ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ್ ಗೆಲುವು, ಚಿಕ್ಕಮಗಳೂರು-ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಗೆಲುವು, ದಕ್ಷಿಣ ಕನ್ನಡ-ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು, ದಾವಣಗೆರೆ- ಚಿತ್ರದುರ್ಗ-ಬಿಜೆಪಿ ಅಭ್ಯರ್ಥಿ ಕೆ ಎಸ್ ನವೀನ್ ವಿಜಯೋತ್ಸವ, ಬೆಳಗಾವಿ-ಬಿಜೆಪಿ ಅಧಿಕೃತ ಅಭ್ಯರ್ಥಿ ಮೂರನೇ ಸ್ಥಾನ, ಕೋಲಾರ-ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು, ಧಾರವಾಡ- ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು, ಮೈಸೂರು-ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಗೆಲುವು, ಮಂಡ್ಯ-ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆಲುವು, ಗುಲ್ಬರ್ಗ, ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಗೆಲುವು, ರಾಯಚೂರು- ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಗೆಲುವು, ಬೆಳಗಾವಿ, ಕಾಂಗ್ರೆಸ್ ಅಭ್ಯರ್ಥಿ ಚೆನ್ನರಾಜ್ ಹಟ್ಟಿಹೊಳಿ ಗೆಲುವು, ದಕ್ಷಿಣ ಕನ್ನಡ-ಉಡುಪಿ- ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರಿಗೆ ಗೆಲುವು ಸಾಧಿಸಿದ್ದಾರೆ.
ಓವೈಸಿ.. ಕೇಳಿಸಿಕೊಳ್ಳಿ, ನಾಯಿ ಕೂಡ ಔರಂಗಜೇಬನ ಗೋರಿ ಮೇಲೆ ಮೂತ್ರ ಮಾಡಲ್ಲ: ದೇವೇಂದ್ರ ಫಡ್ನವೀಸ್
ಕೇಜ್ರಿವಾಲ್, ಶರದ್ ಪವಾರ್ ಮೇಲೆ ಸಚಿವ ಧರ್ಮೇಂದ್ರ ಪ್ರಧಾನ್ ‘ಕಪಾಳಮೋಕ್ಷ’
ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ; ಸ್ವತಂತ್ರ ಭಾರತದ ದೊಡ್ಡ ವಿನಾಶ ಎಂದ ಕೇಜ್ರಿವಾಲ್
ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲವೇ ; ಹೆಚ್ಡಿಕೆ ಪ್ರಶ್ನೆ
ರಾಷ್ಟ್ರವನ್ನು ದಾರಿತಪ್ಪಿಸುವ ನಕಲಿ ಹಿಂದುತ್ವ ಪಕ್ಷವಿದೆ: ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ
ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ್ದ ನಟಿಯ ಬಂಧನ