Published
6 months agoon
By
UNI Kannadaಮಧ್ಯಪ್ರದೇಶ : ಜನೆವರಿ 11 (ಯು.ಎನ್.ಐ.) ಬಾಲಿವುಡ್ ನ ಖ್ಯಾತ ನಟ ಶಾರೂಕ್ ಖಾನ್ ಅವರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಜನವರಿ 6, 2022 ರಂದು ಅನಾಮಿಕನೊಬ್ಬ ಮಹಾರಾಷ್ಟ್ರ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ, ಶಾರುಖ್ ಖಾನ್ ಅವರ ಐಷಾರಾಮಿ ಬಂಗಲೆ ಮನ್ನತ್ ಅನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.
ಈ ಪ್ರಕರಣದ ಬೆನ್ನತ್ತಿದ ಮುಂಬೈ ಪೊಲೀಸರು, ಕರೆಯನ್ನು ಟ್ರೇಸ್ ಮಾಡಿದಾಗ ಮಧ್ಯಪ್ರದೇಶದ ಜಬಲ್ಪುರದಿಂದ ಕರೆ ಬಂದಿರುವುದು ಪತ್ತೆಯಾಗಿದೆ. ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರು, ಮಧ್ಯಪ್ರದೇಶದ ಜಬಲ್ಪುರದಲ್ಲಿಯೇ ಆರೋಪಿಯನ್ನು ಬಂಧನ ಮಾಡಿದ್ದಾರೆ. ಬಂಧಿತ ಆರೋಪಿ ಜಿತೇಶ್ ಠಾಕೂರ್ ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ.
ಶಾರುಖ್ ಬಂಗಲೆ ಅಷ್ಟೇ ಅಲ್ಲದೆ, ಮುಂಬೈನ ವಿವಿಧೆಡೆ ಭಯೋತ್ಪಾದಕ ದಾಳಿ ಹಾಗೂ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ. ಆರೋಪಿಯ ವಿರುದ್ಧ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಡಿತದ ಚಟ ಹೊಂದಿದ್ದ ಆರೋಪಿ, ಈ ಹಿಂದೆಯೂ ಸಹ ಕರೆ ಮಾಡಿ ಪೊಲೀಸ್ ಎಸ್ಒಎಸ್ ಸೇವಾ ಡಯಲ್ 100 ನೌಕರರೊಂದಿಗೆ ಜಗಳ ಮಾಡಿದ್ದ ಎಂದು ತಿಳಿದು ಬಂದಿದೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್