ರಾಜಕೀಯ
ಕಾಂಗ್ರೆಸ್ಸಿಗರದು ಗೂಂಡಾಗಳ ಪಕ್ಷ: ಕಟೀಲ್

Published
6 months agoon
By
UNI Kannadaಬೆಂಗಳೂರು: ಜನೆವರಿ 03(ಯು.ಎನ್.ಐ) ಮುಖ್ಯಮಂತ್ರಿಗಳ ಎದುರೇ ವೇದಿಕೆಯಲ್ಲಿಯೇ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣರ ಮೇಲೆ ಕಾಂಗ್ರೆಸ್ ಸಂಸದರ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಎಸ್.ರವಿ ಹಲ್ಲೆಗೆ ಮುಂದಾಗಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಕಾಂಗ್ರೆಸಿಗರದ್ದು ಗೂಂಡಾ ರಾಜಕಾರಣ,ಗೂಂಡಾಗಳ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ರಾಮನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನಿಗದಿಯಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವರ ಮೇಲೆ ಹಲ್ಲೆ ಮಾಡಲು ಕಾಂಗ್ರೆಸ್ನ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದು, ಮೈಕ್ ಕಿತ್ತೆಸೆದಿದ್ದಾರೆ. ಕಾಂಗ್ರೆಸ್ ಎಂಎಲ್ಸಿ ಎಸ್.ರವಿ, ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡಿದ್ದಾರೆ. ಇದಲ್ಲದೇ ಕಾಂಗ್ರೆಸ್ಸಿಗರು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುವ ಮಾದರಿಯಲ್ಲಿ ತಮ್ಮ ತೋಳ್ಬಲದ ರಾಜಕೀಯ ಪ್ರದರ್ಶಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಗೂಂಡಾ ಪ್ರವೃತ್ತಿಗೆ ಕೈಗನ್ನಡಿಯಂತಿದೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಹಿಂದಿನಿಂದಲೇ ತೋಳ್ಬಲ ಮತ್ತು ಹಣಬಲದಿಂದ ತನ್ನ ಸಾಮರ್ಥ್ಯ ತೋರಿಸುತ್ತಿತ್ತು. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನಗಣ್ಯ ಸ್ಥಿತಿಗೆ ಬಂದಿದೆ. ಜನಪರ ಕಾರ್ಯಕ್ರಮಗಳನ್ನು ನೀಡಿದ ಪ್ರಧಾನಿಗಳಾದ ನರೇಂದ್ರ ಮೋದಿಯವರ ಅಭಿವೃದ್ಧಿಯ ಚಿಂತನೆ ಮತ್ತು ಅನುಷ್ಠಾನವನ್ನು ಗಮನಿಸಿ ಜನರು ದೇಶದೆಲ್ಲೆಡೆ ಬಿಜೆಪಿಯತ್ತ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ರಾಜ್ಯದಲ್ಲಿ ಬಳಿಕ ನಡೆದ ವಿಧಾನಸಭಾ ಉಪ ಚುನಾವಣೆ, ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಜನರು ಕಾಂಗ್ರೆಸ್ಸಿಗರ ವಿರುದ್ಧ ಮತ್ತು ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ಪಕ್ಷದವರು ಬುದ್ಧಿ ಕಲಿತಿಲ್ಲ. ಕಾಂಗ್ರೆಸ್ಸಿಗರ ಈ ಮಾದರಿಯ ತೋಳ್ಬಲದ ಮತ್ತು ದರ್ಪದ ರಾಜಕಾರಣಕ್ಕೆ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
‘ಕೈ’ ಹಿಡಿದ ಕೊತ್ತೂರು ಮಂಜುನಾಥ್ ಹಾಗೂ ಎಂ.ಸಿ.ಸುಧಾಕರ್
ಕೋರ್ಟ್ ಸೂಚನೆ ಬೆನ್ನಲ್ಲೇ “ಬಾಳಾಸಾಹೇಬರ ಹಿಂದುತ್ವಕ್ಕೆ ಜಯ” ಎಂದ ಏಕನಾಥ್ ಶಿಂಧೆ
ದ್ರೋಹಿಗಳು ಗೆಲ್ಲುವುದಿಲ್ಲ; ಶಿಂಧೆ ಬಣಕ್ಕೆ ಆದಿತ್ಯ ಠಾಕ್ರೆ ಟಾಂಗ್
ಏಕನಾಥ್ ಶಿಂಧೆ ಬಣಕ್ಕೆ ತಾತ್ಕಾಲಿಕ ರಿಲೀಫ್; ಮುಂದಿನ ವಿಚಾರಕ್ಕೆ ಜು.11ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ರೆಬೆಲ್ ಸಚಿವರ ಖಾತೆ ಕಿತ್ತುಕೊಂಡ ಸಿಎಂ ಉದ್ಧವ್ ಠಾಕ್ರೆ
“ಇಡಿ ಸಮನ್ಸ್ ಗೆ ಸಂಜಯ್ ರಾವತ್ಗೆ ನನ್ನ ಶುಭಾಶಯಗಳು”: ಶಿಂಧೆ ಪುತ್ರನ ವ್ಯಂಗ್ಯ