Published
6 months agoon
By
Vanitha Jainಬರ್ನಾಲಾ: ಜನೆವರಿ 06 (ಯು.ಎನ್.ಐ) ಪಂಜಾಬಿನಲ್ಲಿ ಸಂಭವಿಸಿದ ಪ್ರಧಾನಿ ಮೋದಿ ಭದ್ರತಾ ಲೋಪ ವಿಚಾರವನ್ನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ನಿರಾಕರಿಸಿದ್ದು, ಇದೊಂದು ದೊಡ್ಡ ನಾಟಕ ಎಂದು ಕಿಡಿಕಾರಿದ್ದಾರೆ.
ಬರ್ನಾಲಾದ ದನಾ ಮಂಡಿಯಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಸಿಧು, ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಮತೆ ಒತ್ತಾಯಿಸಿ ರೈತರು ಸತತ ಒಂದು ವರ್ಷಕ್ಕೂ ಹೆಚ್ಚು ದಿನಗಳಿಂದ ದೆಹಲಿಯ ಗಡಿಯಲ್ಲಿ ಕಾಯುತ್ತಿದ್ದರು. ಆದರೆ ಅವರು ಯಾರೂ ಗಲಾಟೆ ಮಾಡಲಿಲ್ಲ ಎಂದು ಪ್ರಧಾನಿ ಮೋದಿಗೆ ನೆನಪಿಸಿದರು.
ಪ್ರಧಾನ ಮಂತ್ರಿಯವರ ಭದ್ರತಾ ಪಡೆ ಫಿರೋಜ್ಪುರಕ್ಕೆ ಹೋಗುವ ಮಾರ್ಗದಲ್ಲಿ ಬಟಿಂಡಾದ ಮೇಲ್ಸೇತುವೆಯೊಂದರಲ್ಲಿ 15-20 ನಿಮಿಷಗಳ ಕಾಲ ಸಿಕ್ಕಿಹಾಕಿಕೊಂಡಿತು, ಇದು ಪ್ರಮುಖ ಭದ್ರತಾ ಉಲ್ಲಂಘನೆಯಾಯಿತೇ? ಎಂದು ಪ್ರಶ್ನಿಸಿದ ಅವರು ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಭದ್ರತಾ ಲೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ, ರಸ್ತೆ ಮಾರ್ಗವಾಗಿ ಫಿರೋಜ್ಪುರಕ್ಕೆ ಹೋಗುತ್ತಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಪ್ರಧಾನಿ ಮೋದಿಯವರ ಭದ್ರತೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿದ್ದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಉದ್ಧವ್ ಠಾಕ್ರೆ
ರಾಜಸ್ಥಾನ ಶಿರಚ್ಛೇದ: ಹಂತಕರಿಗೆ ಪಾಕಿಸ್ತಾನದಲ್ಲಿ 15 ದಿನ ಟ್ರೈನಿಂಗ್
National Statistics Day: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!
ಉದಯಪುರ ಹತ್ಯೆ: ಎನ್ಐಎ ತನಿಖೆ – ಕೇಂದ್ರ ಸರಕಾರ ಆದೇಶ
ಉದಯಪುರ ಟೈಲರ್ ಹತ್ಯೆ ಖಂಡಿಸಿದ ಮಮತಾ ಬ್ಯಾನರ್ಜಿ
ಬಿಹಾರ ರಾಜಕೀಯ: ಓವೈಸಿ ಪಾರ್ಟಿಯಿಂದ ನಾಲ್ವರು ಶಾಸಕರು ಆರ್ಜೆಡಿಗೆ ಜಿಗಿತ!