Published
6 months agoon
By
Vanitha Jainಮುಂಬೈ: ಜನೆವರಿ 11 (ಯು.ಎನ್.ಐ.) ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಸೋಲಿಸಲು ಕೆಲವು ಪಕ್ಷಗಳು ಪಂಣ ತೊಟ್ಟಿದ್ದು ಇದು ಉತ್ತರ ಪ್ರದೇಶ ರಾಜಕೀಯ ರಂಗದಲ್ಲಿ ದೊಡ್ಡ ಟ್ವಿಸ್ಟ್ ಸಿಕ್ಕಿದೆ.
ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಜೊತೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಮೈತ್ರಿ ಮಾಡಿಕೊಂಡಿರುವುದಾಗಿ ಘೋಷಿಸಿದ್ದಾರೆ.
ಯುಪಿಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸಂಪುಟಕ್ಕೆ ಇಂದು ರಾಜ್ಯ ಸಚಿವ ಮತ್ತು ಹಿರಿಯ ಬಿಜೆಪಿ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಎನ್ಸಿಪಿ ವರಿಷ್ಠರಿಂದ ಈ ನಿರ್ಧಾರ ಹೊರಬಿದ್ದಿದೆ.
ಮುಂಬೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪವಾರ್, ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಮುನ್ನ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಮತದಾರರನ್ನು ಧ್ರುವೀಕರಣಗೊಳಿಸುತ್ತಿದೆ ಎಂದು ಆರೋಪಿಸಿದ ಅವರು, ಉತ್ತರ ಪ್ರದೇಶದ 13 ಬಿಜೆಪಿ ಶಾಸಕರು ಕೇಸರಿ ಪಕ್ಷವನ್ನು ತೊರೆದು ಎಸ್ಪಿಗೆ ಸೇರಲಿದ್ದಾರೆ ಎಂದು ಹೇಳಿದರು.
“ಉತ್ತರಪ್ರದೇಶದ ಜನರು ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ. ಉತ್ತರ ಪ್ರದೇಶದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ನಾವು ರಾಜ್ಯದಲ್ಲಿ ಬದಲಾವಣೆಯನ್ನು ಖಂಡಿತವಾಗಿ ನೋಡುತ್ತೇವೆ” ಎಂದರು.
2022ರ ಗೋವಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಎನ್ಸಿಪಿ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ ಅವರು, ಕರಾವಳಿ ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಜಂಟಿ ಹೋರಾಟ ನಡೆಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಎನ್ಸಿಪಿ ನಾಯಕ ಪ್ರಫುಲ್ ಪಟೇಲ್, ಶಿವಸೇನೆಯ ಸಂಜಯ್ ರಾವತ್ ಅವರು ಸ್ಥಳೀಯ ಕಾಂಗ್ರೆಸ್ ನಾಯಕರೊಂದಿಗೆ ಮಾತನಾಡುತ್ತಿದ್ದಾರೆ” ಎಂದು ತಿಳಿಸಿದರು.
ಅಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂಬ ಚಿಂತನೆ ಇದ್ದು, ಸಮಾನ ಮನಸ್ಕ ಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದೆ. ಗೋವಾದಲ್ಲಿ ಪರಿವರ್ತನೆ ಬೇಕು ಎಂಬುದು ನಮ್ಮ ಬಯಕೆ. ಅಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಅಗತ್ಯವಿದೆ ಎಂದರು.
‘ಕೈ’ ಹಿಡಿದ ಕೊತ್ತೂರು ಮಂಜುನಾಥ್ ಹಾಗೂ ಎಂ.ಸಿ.ಸುಧಾಕರ್
ಕೋರ್ಟ್ ಸೂಚನೆ ಬೆನ್ನಲ್ಲೇ “ಬಾಳಾಸಾಹೇಬರ ಹಿಂದುತ್ವಕ್ಕೆ ಜಯ” ಎಂದ ಏಕನಾಥ್ ಶಿಂಧೆ
ದ್ರೋಹಿಗಳು ಗೆಲ್ಲುವುದಿಲ್ಲ; ಶಿಂಧೆ ಬಣಕ್ಕೆ ಆದಿತ್ಯ ಠಾಕ್ರೆ ಟಾಂಗ್
ಏಕನಾಥ್ ಶಿಂಧೆ ಬಣಕ್ಕೆ ತಾತ್ಕಾಲಿಕ ರಿಲೀಫ್; ಮುಂದಿನ ವಿಚಾರಕ್ಕೆ ಜು.11ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ರೆಬೆಲ್ ಸಚಿವರ ಖಾತೆ ಕಿತ್ತುಕೊಂಡ ಸಿಎಂ ಉದ್ಧವ್ ಠಾಕ್ರೆ
“ಇಡಿ ಸಮನ್ಸ್ ಗೆ ಸಂಜಯ್ ರಾವತ್ಗೆ ನನ್ನ ಶುಭಾಶಯಗಳು”: ಶಿಂಧೆ ಪುತ್ರನ ವ್ಯಂಗ್ಯ