Published
2 weeks agoon
ಮುಂಬೈ:ಜೂನ್ 22 (ಯು.ಎನ್.ಐ.) ಮಹಾರಾಷ್ಟ್ರದ ರಾಜಕೀಯ ಬಿರುಗಾಳಿಯ ಮಧ್ಯೆ ಮತ್ತೊಂದು ಟ್ವಿಸ್ಟ್ ಪಡೆದಿದೆ. ಬಂಡಾಯ ಸೇನಾ ನಾಯಕ ಏಕನಾಥ್ ಶಿಂಧೆ ಅವರನ್ನು ಸೇರಿದ್ದಾರೆ ಎಂದು ಈ ಹಿಂದೆ ಊಹಿಸಲಾಗಿದ್ದ ಶಿವಸೇನೆ ಶಾಸಕ ನಿತಿನ್ ದೇಶಮುಖ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ತನ್ನನ್ನು ಅಪಹರಿಸಲಾಗಿತ್ತು. ಗುಜರಾತ್ನ ಸೂರತ್ಗೆ ಕರೆದೊಯ್ಯಲಾಗಿತ್ತು, ಅಲ್ಲಿಂದ ತಪ್ಪಿಸಿಕೊಂಡು ಬಂದೆ ಎಂದಿದ್ದಾರೆ.
ನಾನು ತಪ್ಪಿಸಿಕೊಂಡು ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಸ್ತೆಯಲ್ಲಿ ನಿಂತಿದ್ದೆ. ದಾರಿಹೋಕರ ಸಹಾಯ ಪಡೆಯಲು ಪ್ರಯತ್ನಿಸುತ್ತಿದ್ದಾಗ ನೂರಕ್ಕೂ ಹೆಚ್ಚು ಪೊಲೀಸರು ಬಂದು ನನ್ನನ್ನು ಆಸ್ಪತ್ರೆಗೆ ಕರೆದೊಯ್ದರು. ಅವರು ನನಗೆ ಹೃದಯಾಘಾತವಾಗಿದೆ ಎಂದು ಹೇಳಿ ನನ್ನ ದೇಹದ ಮೇಲೆ ಕೆಲವು ವೈದ್ಯಕೀಯ ಕಾರ್ಯವಿಧಾನಗಳನ್ನು ಮಾಡಲು ಪ್ರಯತ್ನಿಸಿದರು.ನಾನು ಯಾವುದೇ ಹಠಾತ್ ಆರೋಗ್ಯ ತೊಂದರೆಗಳನ್ನು ಅನುಭವಿಸಲಿಲ್ಲ. ಆದರೆ ಬಲವಂತವಾಗಿ ನನ್ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಬಲವಂತವಾಗಿ ಕೆಲವು ಚುಚ್ಚುಮದ್ದುಗಳನ್ನು ನೀಡಲಾಯಿತು ಎಂದು ನಿತಿನ್ ದೇಶಮುಖ್ ಹೇಳಿದರು. ನಾನು ಉದ್ಧವ್ ಠಾಕ್ರೆ ಅವರೊಂದಿಗೆ ಸಹಜವಾಗಿಯೇ ಇದ್ದೇನೆ ಎಂದು ವರದಿಗಾರರು ತಮ್ಮ ನಿಷ್ಠೆಯ ಬಗ್ಗೆ ಕೇಳಿದಾಗ ಉತ್ತರಿಸಿದರು.
ನಿತಿನ್ ದೇಶಮುಖ್ ಅವರ ಪತ್ನಿ ನಿನ್ನೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ತನ್ನ ಪತಿ ನಾಪತ್ತೆಯಾಗಿದ್ದಾರೆಂದು ದೂರು ದಾಖಲಿಸಿದ್ದರು. ಅವರಿಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದರು. ಶಾಸಕ ನಿತಿನ್ ದೇಶಮುಖ್ ಮಹಾರಾಷ್ಟ್ರದ ಬಾಲಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಜನ ತಪ್ಪುಗಳನ್ನು ಮಾಡುತ್ತಾರೆ ಆದರೆ ಅವುಗಳನ್ನು ಸರಿಪಡಿಸಬಹುದು: ಸಿಎಂ ಮಮತಾ ಬ್ಯಾನರ್ಜಿ
ಮಹಾರಾಷ್ಟ್ರ ಸರ್ಕಾರ; ಬಿಜೆಪಿಯ 25, ಶಿಂಧೆ ಟೀಂನ 13 ಮಂತ್ರಿಗಳನ್ನು ಹೊಂದುವ ಸಚಿವ ಸಂಪುಟ
ಟಿಎಂಸಿ ನಾಯಕ ಸೇರಿದಂತೆ ಆತನ ಇಬ್ಬರು ಸಹಚರರ ಹತ್ಯೆ
‘ಸಿದ್ದರಾಮಯ್ಯ ಕಾಲದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ’ – ರೇಣುಕಾಚಾರ್ಯ
ಧರ್ಮವನ್ನು ವ್ಯಕ್ತಿಗಳಿಗೆ ಖಾಸಗಿಯಾಗಿ ಆಚರಿಸಲು ಬಿಡಬೇಕು; ಮೊಯಿತ್ರಾ ವಿವಾದಕ್ಕೆ ಶಶಿತರೂರ್ ಪ್ರತಿಕ್ರಿಯೆ
ಲೋಕಸಭೆಯಲ್ಲೂ ಟೀಂ ಠಾಕ್ರೆ vs ಟೀಂ ಶಿಂಧೆ