Published
6 days agoon
ಬೆಂಗಳೂರು: ಮೇ ೧೪ (ಯು.ಎನ್.ಐ.) ಇಂದು ರಾಜ್ಯ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ ಹಾಗೂ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಿ ಪಟ್ಟಿ ಸಿದ್ದಪಡಿಸುವ ಸಾಧ್ಯತೆ ಇದೆ.
ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಾಯಿ, ಪಕ್ಷದ ರಾಜ್ಯಾಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಜೊತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆೆಲೆಯಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಲೆಕ್ಕಾಚಾರ: ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವುದರಿಂದ ವಿಧಾನಪರಿಷತ್ ಹಾಗೂ ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿಯೂ ಸಾಕಷ್ಟು ಲೆಕ್ಕಾಾಚಾರ ಹಾಕಲಾಗುತ್ತದೆ ಎಂದು ತಿಳಿದು ಬಂದಿದೆ. ಪ್ರಮುಖವಾಗಿ ರಾಜ್ಯಸಭೆಗೆ ಈಗಾಗಲೇ ಹಾಲಿ ಸದಸ್ಯರಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೆ.ಸಿ. ರಾಮಮೂರ್ತಿ ಅವರನ್ನೇ ಮುಂದುವರೆಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿಿವೆ. ಆದರೆ, ಪಕ್ಷದ ಹೈಕಮಾಂಡ್ ತೆರೆ ಮರೆಯಲ್ಲಿ ಪಕ್ಷಕ್ಕಾಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಆಲೋಚನೆ ಮಾಡುತ್ತಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆೆಲೆಯಲ್ಲಿ ಯಾರಾದರೂ ಅಚ್ಚರಿಯ ವ್ಯಕ್ತಿಿಗಳನ್ನೂ ರಾಜ್ಯಸಭೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿಿವೆ.
ಇನ್ನು ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಖಾಲಿಯಾಗುವ ಏಳು ಸ್ಥಾನಗಳಲ್ಲಿ ಬಿಜೆಪಿ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ನಾಲ್ಕು ಸ್ಥಾನಗಳು ಬಿಜೆಪಿಗೆ ದೊರೆಯಲಿದ್ದು, ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಲಕ್ಷ್ಮಣ ಸವದಿ ಹಾಗೂ ಲೆಹರ್ ಸಿಂಗ್ ಅವರಿಗೆ ಪುನರಾಯ್ಕೆೆ ಮಾಡಬೇಕೊ ಅಥವಾ ಬೇರೆಯವರಿಗೆ ನೀಡಬೇಕೊ ಎನ್ನುವ ಕುರಿತಂತೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಬಿಜೆಪಿ ಉನ್ನತ ಮೂಲಗಳ ಪ್ರಕಾರ ನಾಲ್ಕು ಸ್ಥಾನ ಒಬ್ಬರು ಮಹಿಳೆ, ಒಬ್ಬರು ಎಸ್ಸಿ, ಒಬ್ಬರು ಒಬಿಸಿ ಮತ್ತೊೊಂದು ಸಾಮಾನ್ಯ ವರ್ಗದವರಿಗೆ ನೀಡಬೇಕು ಎನ್ನುವ ಲೆಕ್ಕಾಾಚಾರ ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಂಭಾವ್ಯ ಆಕಾಂಕ್ಷಿಗಳು: ಮಹಿಳೆಯರ ಕೋಟಾದಲ್ಲಿ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಎಸ್ಸಿ ಕೋಟಾದಡಿ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಾಮಿ, ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯ ಜಗದೀಶ ಹಿರೇಮನಿ, ಹುಬ್ಬಳ್ಳಿ ಮೂಲದ ಚಂದ್ರಶೇಖರ ಎನ್ನುವವರ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ತಿಳಿದು ಬಂದಿದೆ.
ಲೆಹರ್ ಸಿಂಗ್ ಅವರಿಗೆ ನೀಡದಿದ್ದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾಣ ಅವರಿಗೆ ನೀಡುವ ಬಗ್ಗೆೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ವಿಚಾರದಲ್ಲಿಯೂ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದ್ದು, ಅವರು ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಲವು ತೋರಿಸಿದರೆ, ಒಂದು ವರ್ಷದ ಅವಧಿಗೆ ಅವರಿಗೆ ಟಿಕೆಟ್ ನೀಡಬೇಕಾ ಅಥವಾ ಮತ್ತೊಬ್ಬರಿಗೆ ಅವಕಾಶ ನೀಡಬೇಕಾ ಎನ್ನುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇವರಲ್ಲದೇ ಹುಡಾ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ, ಸಿದ್ದರಾಜು, ಶಿಕ್ಷಕರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಿಯಾಗಿರುವ ಮೋಹನ್ ಲಿಂಬಿಕಾಯಿ ಅವರ ಹೆಸರುಗಳೂ ಕೇಳಿ ಬರುತ್ತಿವೆ
ಕೊನೆಗೂ ಸಿಕ್ತು ಜಾಮೀನು.. 2 ವರ್ಷದ ಬಳಿಕ ಜೈಲಿಂದ ಹೊರಬಂದ ಅಜಂಖಾನ್
ಸುನೀಲ್ ಜಖರ್ ಬಿಜೆಪಿಗೆ ಸೇರ್ಪಡೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಸಾಮೂಹಿಕ ನಾಯಕತ್ವ ಇಲ್ಲದೇ ಕಾಂಗ್ರೆಸ್ ಗೆಲ್ಲುವುದು ಸಾಧ್ಯವೇ ?
ಶರದ್ ಪವಾರ್ ವಿರುದ್ಧ ಪೋಸ್ಟ್; ಸಿನಿಮಾ ನಟಿಗೆ ನ್ಯಾಯಾಂಗ ಬಂಧನ
ಒಂದೇ ದಿನ ಕಾಂಗ್ರೆಸ್ ಗೆ ಡಬಲ್ ಶಾಕ್! ಶಾಸಕ ಸ್ಥಾನಕ್ಕೆ ರಾಜಸ್ತಾನ ಸಿಎಂ ಆಪ್ತ ರಾಜೀನಾಮೆ
ರಾಜೀವ್ ಗಾಂಧಿ ಹತ್ಯೆ ಕೇಸ್ ಅಪರಾಧಿಯ ಬಿಡುಗಡೆ ‘ನೋವು ಮತ್ತು ನಿರಾಶದಾಯಕ’: ಕಾಂಗ್ರೆಸ್