Published
1 week agoon
ಅಬುದಾಬಿ: ಮೇ 13 (ಯು.ಎನ್.ಐ.) ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ 73 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಹೋರಾಡಿದ ನಂತರ ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಸಾವಿಗೆ ಸಂತಾಪ ಸೂಚಿಸಿ, ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಶುಕ್ರವಾರದಿಂದ ಧ್ವಜಗಳನ್ನು ಅರ್ಧಮಟ್ಟಕ್ಕಿಳಿಸುವುದು ಮತ್ತು ಮೊದಲ ಮೂರು ದಿನಗಳವರೆಗೆ ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ.
ಶೇಖ್ ಖಲೀಫಾ ಅವರು ನವೆಂಬರ್ 2004 ರಲ್ಲಿ ಯುಎಇಯ ಎರಡನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು, ಅವರ ತಂದೆಯ ನಂತರ ಫೆಡರೇಶನ್ನ ಏಳು ಎಮಿರೇಟ್ಗಳಲ್ಲಿ ಶ್ರೀಮಂತ ಅಬುಧಾಬಿಯ 16 ನೇ ಆಡಳಿತಗಾರರಾದರು.
ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 2014 ರಿಂದ ಸಾರ್ವಜನಿಕವಾಗಿ ವಿರಳವಾಗಿ ಕಾಣಿಸಿಕೊಂಡಿದ್ದರು. ಪಾರ್ಶ್ವವಾಯು ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೂ ಅವರು ಸಮಸ್ಯೆ ಪರಿಹರಿಸಿ ತೀರ್ಪು ನೀಡುತ್ತಿದ್ದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯುಎಇ ಅಧ್ಯಕ್ಷರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಶೇಖ್ ಖಲೀಫಾ ಯಾವಾಗಲೂ ಕೇರಳದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಇಟ್ಟುಕೊಂಡಿದ್ದರು ಎಂದು ಹೇಳಿದ್ದಾರೆ.
“ಕೇರಳದೊಂದಿಗೆ ಸದಾ ಸೌಹಾರ್ದಯುತ ಸಂಬಂಧವನ್ನು ಇಟ್ಟುಕೊಂಡಿರುವ ಯುಎಇ ಅಧ್ಯಕ್ಷ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಎಮಿರೇಟ್ಸ್ ಅನ್ನು ಆಧುನೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ದೂರದೃಷ್ಟಿಯ ನಾಯಕರಾಗಿದ್ದರು. ಅವರ ಕೊಡುಗೆಗಳು ಶಾಶ್ವತವಾಗಿ ಸ್ಮರಣೀಯವಾಗಿದೆ,” ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.
Deeply saddened by the passing of the UAE President His Highness Sheikh Khalifa bin Zayed Al Nahyan who has always kept cordial relations with Kerala. He was a visionary leader who played a key role in modernising the Emirates. His contributions will be remembered forever. pic.twitter.com/aL0XQ9FK9s
— Pinarayi Vijayan (@pinarayivijayan) May 13, 2022
ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ ಕನ್ನಡ ಹಿರಿಮೆ ಸಾರಿದ ಸಂಸದ
ಶ್ರೀಲಂಕ ಆರ್ಥಿಕ ಬಿಕ್ಕಟ್ಟು: ಅಧ್ಯಕ್ಷ ರಾಜಪಕ್ಸೆ ವಿರುದ್ಧ ತೀವ್ರಗೊಂಡ ಹೋರಾಟ
ಮೆಕ್ಸಿಕೋದಲ್ಲಿ ಗೋಡೆಗೆ ಡಿಕ್ಕಿ ಹೊಡೆದ ಬಸ್: 14 ಮಂದಿ ಸಾವು
ಪ್ರಪಂಚದಲ್ಲಿ ಎದುರಾಗಿದೆ ಮಂಕಿಪಾಕ್ಸ್ ಭೀತಿ; ಏನಿದು ಮಂಕಿಪಾಕ್ಸ್? ಲಕ್ಷಣಗಳೇನು?
ಭಾರತದಲ್ಲಿ ಯುವತಿಯನ್ನು ವೇಶ್ಯಾಗೃಹಕ್ಕೆ ಮಾರಾಟಮಾಡಿದ ಬಾಂಗ್ಲಾ ದಂಪತಿಗೆ ಮರಣದಂಡನೆ
ಕಾನ್ ಚಲನಚಿತ್ರೋತ್ಸವ; ರೆಡ್ ಕಾರ್ಪೆಟ್ ಮೇಲೆ ಸಚಿವ ಅನುರಾಗ್ ಠಾಕೂರ್ ಜೊತೆ ಸಿನಿ ಸ್ಟಾರ್ಸ್